ಚೇವಾರು ಶಾಲೆಯಲ್ಲಿ ಓಣಂ ಆಚರಣೆ
ಕುಂಬಳೆ: ಚೇವಾರು ಶ್ರೀ ಶಾರದಾ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಹಬ್ಬವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ
ಆಚರಿಸಲಾಯಿತು.ಕಾರ್ಯಕ್ರಮವನ್ನು ಶಾಲಾ ಮುಖ್ಯಶಿಕ್ಷಕರಾದ ಶ್ಯಾಮ ಭಟ್ ಉದ್ಘಾಟಿಸಿದರು.ಎಲ್ಲಾ
ತರಗತಿಗಳಲ್ಲೂ ವಿದ್ಯಾರ್ಥಿಗಳು ಹೂವಿನ ರಂಗೋಲಿ ರಚಿಸಿದರು.ತದನಂತರ ವಿದ್ಯಾರ್ಥಿಗಳು, ಮಹಾಬಲಿ
ಚಕ್ರವರ್ತಿ ಹಾಗೂ ಇತರ ವಿವಿಧ ವೇಷಗಳನ್ನು ಧರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ಶಿಕ್ಷಕ
ಕಾರ್ಯದರ್ಶಿ ಸ್ಕೌಟ್ ಅಧ್ಯಾಪಕ ವಿನೋದ್ ರ ನೇತೃತ್ವದಲ್ಲಿ ಮೆರವಣಿಗೆಯನ್ನು ಏರ್ಪಡಿಸಲಾಯಿತು. ಶಿಕ್ಷಕರಾದ
ಶಂಕರ ನಾರಾಯಣ ಭಟ್,ಶ್ರೀಮತಿ ಸರಸ್ವತಿ, ಶ್ರೀಮತಿ ರಾಜೇಶ್ವರಿ ಶ್ರೀಮತಿ
ಪ್ರಮೀಳಾ,ರವಿಕುಮಾರ್,ಪ್ರಸಾದ್ ರೈ, ಶ್ರೀಮತಿ ಪುಷ್ಪಲತಾ,ಗೋಪಾಲ ಕೃಷ್ಣ ಭಟ್ ಸಹಕರಿಸಿದರು.
ಚೇವಾರು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಕುಂಬಳೆ: ಚೇವಾರು ಶ್ರೀ ಶಾರದಾ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಸಭಾಕಾರ್ಯಕ್ರಮದ
ಅಧ್ಯಕ್ಷ ಸ್ಥಾನವನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಪರಮೇಶ್ವರ ಪಾವಲುಕೋಡಿ
ವಹಿಸಿದರು.ಪೈವಳಿಕೆ ಪಂಚಾಯತು ಸದಸ್ಯೆ ಶ್ರೀಮತಿ ಸುಬೈದಾ ಯಂ.ಪಿ, ಕಾರ್ಯಕ್ರಮವನ್ನು
ಉದ್ಘಾಟಿಸಿದರು.ಮುಖ್ಯಶಿಕ್ಷಕ ಶ್ರೀ ಶ್ಯಾಮಭಟ್,ದಿನದ ಮಹತ್ವವನ್ನು ವಿವರಿಸಿದರು.ಇದೇ
ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರ ದಿನಾಚರಣೆ ಅಂಗವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ
ಭಾಷಣವನ್ನು ಆಲಿಸಿದರು.ನಂತರ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು
ಏರ್ಪಡಿಸಿದರು.ಶಂಕರನಾರಾಯಣ ಭಟ್ ಅತಿಥಿಗಳನ್ನು ಸ್ವಾಗತಿಸಿದರು.ರವಿಕುಮಾರ್ ವಂದಿಸಿದರು.ಚೇವಾರು
ವಿನೋದ ಕಾರ್ಯಕ್ರಮವನ್ನು ನಿರೂಪಿಸಿದರು.
No comments:
Post a Comment