ಚೇವಾರು:ಗಾಂಧೀ ಜಯಂತಿ ಆಚರಣೆ
ಚೇವಾರು ಶ್ರೀ ಶಾರದಾ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧೀ ಜಯಂತಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಶಾಲಾ
ಎಸೆಂಬ್ಲಿಯಲ್ಲಿ,ಸ್ವಚ್ಛತಾ ಅಭಿಯಾನದ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು. ಸಭಾ ಕಾರ್ಯಕ್ರಮದ
ಉದ್ಘಾಟನೆಯನ್ನು ಪೈವಳಿಕೆ ಪಂಚಾಯತು ಸದಸ್ಯೆ
ಸುಬೈದಾ ಟೀಚರ್ ನೆರವೇರಿಸಿ,
ಗಾಂಧೀಜಿಯವರು ಜೀವನದಲ್ಲಿ ಪಾಲಿಸಿದ ಸತ್ಯ,ಶಾಂತಿ,ಅಹಿಂಸೆ,ಪ್ರೇಮ,ಸರಳತೆಯನ್ನು ನಮ್ಮ ಜೀವನದಲ್ಲಿ
ಅಳವಡಿಸಿಕೊಳ್ಳಬೇಕೆಂದು ಕರೆಯಿತ್ತರು.ಪಿ.ಟಿ.ಎ. ಅಧ್ಯಕ್ಷ ಪರಮೇಶ್ವರ ಪಾವಲುಕೋಡಿ ಅಧ್ಯಕ್ಷತೆ
ವಹಿಸಿದರು.ಮುಖ್ಯ ಅತಿಥಿಗಳಾಗಿ ,ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದ ಅಧಿಕಾರಿ ಭರತ್
ಕುಂದಾಪುರ ಮತ್ತು ಮಾತೃ ರಕ್ಷಕ ಸಂಘದ ಅಧ್ಯಕ್ಷೆ ಇಂದಿರಾ ಶುಭಾಶಂಸನೆಗೈದರು. ಶಾಲಾ ಮುಖ್ಯ
ಶಿಕ್ಷಕ ಶ್ಯಾಮ ಭಟ್ ಸ್ವಾಗತಿಸಿದರು. ಶಿಕ್ಷಕಿ ರಾಜೇಶ್ವರಿ ವಂದಿಸಿದರು. ಶಿಕ್ಷಕ ವಿನೋದ್
ಚೇವಾರು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಂಗವಾಗಿ
ಗಾಂಧೀಜಿಯವರ ಭಾವ ಚಿತ್ರಕ್ಕೆ,ವಿದ್ಯಾರ್ಥಿಗಳು,ಶಿಕ್ಷಕರು,ರಕ್ಷಕರು ಪುಷ್ಪಾರ್ಚನೆಗೈದು ಗೌರವ
ಸಲ್ಲಿಸಿದರು.ಪರಿಸರ ಶುಚೀಕರಣ ಮತ್ತು ಗಾಂಧೀಜಿ ಕುರಿತಾದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು.
No comments:
Post a Comment